ಬೆಳ್ತಂಗಡಿ: ಲಾರಿ ಹರಿದು ದ್ವಿಚಕ್ರ ವಾಹನ ಸವಾರ ಸಾವು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜ.25. ಲಾರಿ ಹಾಗೂ ಅಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ದಾರುಣ ಘಟನೆ ನಡೆದಿದೆ. ಜ.೨೫ ರ ಶುಕ್ರವಾರ ಬೆಳ್ತಂಗಡಿ – ಉಜಿರೆಯ ಮಾರ್ಗಮಧ್ಯೆಯ ಕೊಯ್ಯೂರು ಕ್ರಾಸ್ ಎಂಬಲ್ಲಿ ದ್ವಿಚಕ್ರ ವಾಹನ ಸವಾರ ಪಡಂಗಡಿ ಪೊಯ್ಯೆಗುಡ್ಡೆ ಬೋಳ ನಿವಾಸಿ ಚೆನ್ನಪ್ಪ ಅಂಚನ್ (೫೭) ಅಸುನೀಗಿದ್ದಾರೆ.

 

ಚೆನ್ನಪ್ಪ ಅಂಚನ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದಿದ್ದು ಅವರ ತಲೆಯ ಮೇಲೆ ಲಾರಿಯ ಚಕ್ರ ಹರಿದಿದ್ದು ಇದರ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮೃತದೇಹವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group