(ನ್ಯೂಸ್ ಕಡಬ) newskadaba.com ಮಂಗಳೂರು,ಜ.30.ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಸರ್ ಸಿ.ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
![](https://i0.wp.com/newskadaba.com/wp-content/uploads/2018/04/Mahima.gif?resize=900%2C550)
ರಾಜ್ಯ ಮಟ್ಟದ ಸ್ಪರ್ಧೆಯ ಮೊದಲು, ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಫೆಬ್ರವರಿ 5 ರಂದು ಆಯಾ ಜಿಲ್ಲೆಯ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ನೇತೃತ್ವದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ ಪೂರ್ವಾಹ್ನ 10 ಗಂಟೆಗೆ ಆಯಾ ಜಿಲ್ಲೆಗಳಲ್ಲಿ ಆಯೋಜಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಚಂದನ ವಾಹಿನಿ, ದೂರದರ್ಶನ ಕೇಂದ್ರ , ಬೆಂಗಳೂರು ಇಲ್ಲಿ ಅಂತಿಮ ಹಂತದಲ್ಲಿ ರಾಜ್ಯ ಮಟ್ಟದ ಮೌಖಿಕ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
![](https://i0.wp.com/newskadaba.com/wp-content/uploads/2018/05/Intek-Power-System.gif?resize=900%2C550)
ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ-9448867705/ 9449530245/9483549159 ಅಥವಾ ಬೆಂಗಳೂರು ಕರಾವಿಪ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ-080-26718939 ಸಂಪರ್ಕಿಸಬಹುದು ಎಂದು ಗೌರವ ಕಾರ್ಯದರ್ಶಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಗಿರೀಶ್ ಬಿ. ಕಡ್ಲೇವಾಡ ಇವರ ಪ್ರಕಟಣೆ ತಿಳಿಸಿದೆ.
![](https://i0.wp.com/newskadaba.com/wp-content/uploads/2018/04/Brahmashri.gif?resize=1200%2C734)