ಸುಬ್ರಹ್ಮಣ್ಯ: ನಿಲ್ಲಿಸಿದ್ದ ಬೈಕ್ ಕಳ್ಳತನ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30 ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಕ್ತೇಶ್ವರಿ ದೇವಸ್ಥಾನದ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾದ ಘಟನೆ ನಡೆದಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕಾಶಿಕಟ್ಟೆ ನಿವಾಸಿಯಾದ  ಚಂದ್ರ ಎಂಬವರು ಬೈಕ್ ನಿಲ್ಲಿಸಿ ತನ್ನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.

ಕೆಲಸ ಮುಗಿಸಿ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲಿಯೂ ಹುಡುಕಾಡಿದರೂ ಬೈಕ್ ಪತ್ತೆಯಾಗಿರುವುದಿಲ್ಲ. ಬೈಕನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

error: Content is protected !!

Join the Group

Join WhatsApp Group