ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02 ಕರ್ನಾಟಕ ಶಿಕ್ಷಕರ ಅರ್ಹತಾ (kartet-2018)ಪರೀಕ್ಷೆಯು ಫೆಬ್ರವರಿ 3 ರಂದು ಪೂರ್ವಾಹ್ನ 9 ರಿಂದ 12 ಗಂಟೆಯವರೆಗೆ ಮತ್ತು ಅಪರಾಹ್ನ 1.30 ರಿಂದ 4.30 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರದ 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಅವರ ಪ್ರವೇಶ ಪತ್ರದಲ್ಲಿ ಸೂಚಿಸಿರುವಂತೆ ಹಂಚಿಕೆ ಮಾಡಲಾದ ಪರೀಕ್ಷಾ ಕೇಂದ್ರಗಳ ಲ್ಯಾಂಡ್ ಮಾರ್ಕ್ ಆಧರಿಸಿ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯದಲ್ಲಿ ಹಾಜರಾಗಬೇಕು.

 

ಪರೀಕ್ಷಾ ಕೇಂದ್ರಗಳಿಗೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಎಲೆಕ್ಟ್ರಾನಿಕ್ ಗಡಿಯಾರ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ; 0824-2451239 ಸಂಪರ್ಕಿಸಲು  ಉಪನಿರ್ದೆಶಕರು (ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ತ್ವರಿತ ಕ್ರಮಕ್ಕೆ ಸೂಚನೆ ➤ ಎಸ್. ಸಸಿಕಾಂತ್ ಸೆಂಥಿಲ್

error: Content is protected !!
Scroll to Top