ಕಾರವಾರ: ಬೆಂಕಿಗಾಹುತಿಯಾದ ಟವೇರಾ ► ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಚಾಲಕ

(ನ್ಯೂಸ್ ಕಡಬ) newskadaba.com ಕಾರವಾರ, ಆ.01. ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಟವೇರಾ ಕಾರೊಂದು ಬೆಂಕಿಗಾಹುತಿಯಾಗಿ ಸಂಪೂರ್ಣ ಭಸ್ಮವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ ಎಂಬಲ್ಲಿ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ.

ಘಟನೆಯಿಂದ ಮುಂಡಗೋಡು ನಿವಾಸಿ ಕಾರು ಚಾಲಕ ಪ್ರಭು  ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಕಾರಿನಲ್ಲಿ ಯಲ್ಲಾಪುರದ ಉಮ್ಮಚಗಿಯಿಂದ  ತನ್ನ ಊರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top