ಪೆರಿಯಡ್ಕ: ಬೈಕಿಗೆ ಢಿಕ್ಕಿ ಹೊಡೆದು ಓಮ್ನಿ ಪಲ್ಟಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.27. ಓಮ್ನಿ ಕಾರು ಹಾಗೂ ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಿಯಡ್ಕ ಎಂಬಲ್ಲಿ ಬುಧವಾರದಂದು ಸಂಭವಿಸಿದೆ.

ಗಾಯಗೊಂಡ ಸವಾರನನ್ನು ಕೊಯಿಲ ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಕೊಯಿಲದಿಂದ ಉಪ್ಪಿನಂಗಡಿ ಕಡೆ ತೆರಳುತ್ತಿದ್ದ ಬೈಕ್ ಗೆ ಪೆರಿಯಡ್ಕ ಸಮೀಪ ಓಮ್ನಿ ಕಾರು ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಓಮ್ನಿ ಚಾಲಕ ಸತ್ಯನಾರಾಯಣ ಭಟ್ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದೀರಾ..? ► ಹಾಗಾದರೆ ನಿಮಗೆ ಕಾದಿದೆ ಕ್ರಿಮಿನಲ್ ಕೇಸ್

error: Content is protected !!
Scroll to Top