ಐತ್ತೂರು: ಭಾರೀ ಗಾಳಿ ಮಳೆಗೆ ದೂರಕ್ಕೆ ಹಾರಿದ ಮನೆಯ ಮೇಲ್ಛಾವಣಿ ➤ ವಿದ್ಯುತ್ ತಂತಿಯ ಮೇಲೆ ಮರಗಳು ಉರುಳಿದ್ದರಿಂದ‌ ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ಎ.06. ಪರಿಸರದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಹಲವು ಮನೆಗಳಿಗೆ, ಅಪಾರ ಕೃಷಿಗೆ ಹಾನಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ.

ಶುಕ್ರವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ಪುಟ್ಟಣ್ಣ ಗೌಡ ಎಂಬವರ ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಅಪಾರ ನಷ್ಟ ಅಂದಾಜಿಸಲಾಗಿದೆ. ಇನ್ನುಳಿದಂತೆ ಕಲ್ಲಾಜೆ ಪರಿಸರದಲ್ಲಿ ಹಲವಾರು ಮರಗಳು ಧರೆಗೆ ಉರುಳಿದ್ದರಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ.

Also Read  ಬೆಳ್ಳಾರೆ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು...!

error: Content is protected !!
Scroll to Top