ಶಿರಾಡಿ: ಆಳಕ್ಕೆ ಉರುಳಿದ ಟೊಯೋಟಾ ಎಟಿಯೋಸ್ ಕಾರು ➤ ಓರ್ವ ಮೃತ್ಯು, ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.07. ಚಾಲಕನ ನಿಯಂತ್ರಣ ತಪ್ಪಿದ ಟೊಯೋಟಾ ಎಟಿಯೋಸ್ ಕಾರೊಂದು ರಸ್ತೆ ಬದಿಯ ಆಳ ಪ್ರದೇಶಕ್ಕೆ ಉರುಳಿ ಬಿದ್ದುದರಿಂದ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ಮಂಗಳವಾರದಂದು ನಡೆದಿದೆ.

ಬೆಂಗಳೂರು ಮೂಲದ ಯಾತ್ರಾರ್ಥಿಗಳಿದ್ದ ಕಾರು ಧರ್ಮಸ್ಥಳದಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಗ್ರಾಮದ ಕೊಡ್ಯಕಲ್ಲುವಿನಲ್ಲಿ ರಸ್ತೆ ಬದಿಯ ಆಳವಾದ ಗುಂಡಿಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮನೋಜ್(25), ಪ್ರಶಾಂತ್ (23) ಸೇರಿದಂತೆ ನಾಲ್ಕು ಜನರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ನಾಳೆ (ಡಿ. 29) ರಾಜ್ಯಕ್ಕೆ ಗೃಹಸಚಿವ ಅಮಿತ್ ಶಾ ಭೇಟಿ

error: Content is protected !!
Scroll to Top