ವಿಕೋಪ ನಿರ್ವಹಣೆ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10. ಇಂದು ಜಿಲ್ಲಾಧಿಕಾರಿ ಕಚೇರಿ ಸಂಕಿರಣದಲ್ಲಿ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳಿಗೆ ಜಿಲ್ಲಾ ವಿಕೋಪ ನಿರ್ವಹಣೆ ಯೋಜನೆಯ ಪರಿಷ್ಕರಣೆ ಹಾಗೂ ತಯಾರಿಕೆ ಬಗ್ಗೆ ಕಾರ್ಯಾಗಾರ ನಡೆಯಿತು. ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ , ಆಡಳಿತ ತರಬೇತಿ ಸಂಸ್ಥೆ ಮೈಸೂರು ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಾಗಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಉದ್ಘಾಟಿಸಿದರು. ಆಡಳಿತ ತರಬೇತಿ ಸಂಸ್ಥೆ ಮೈಸೂರಿನ ವಿಕೋಪ ನಿರ್ವಹಣೆ ವಿಭಾಗದ ಡಾ ಚಂದ್ರ ನಾಯಕ್, ಡಿಟಿಐನ ಪ್ರಾಂಶುಪಾಲರಾದ ನಿರ್ದೇಶಕರಾದ ಪ್ರಮೀಳ ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group