ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com,ಬೆಳ್ತಂಗಡಿ,ಮೇ.17. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಶೃಂಗೇರಿಯಿಂದ ಹೊರಟು ಮಧ್ಯಾಹ್ನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಗುರುವಾರ ಭೇಟಿ ನೀಡಿದರು. ಬಳಿಕ ಸಂಜೆ 5 ಗಂಟೆಗೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ರಾಜಕೀಯ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.ದೇವರ ದರ್ಶನ ಪಡೆಯಲು ಬಂದಿದ್ದೇನೆ. ರಾಜಕೀಯ ವಿಚಾರವಾಗಿ ನೋ ಕಮೆಂಟ್ಸ್‌ ಎಂದರು. ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ಸದಾಶಿವ ಮತ್ತಿತರರಿದ್ದರು.

Also Read  ಬಿಗ್ ಬಜೆಟ್ ಸಿನಿಮಾ ಮಾರ್ಟಿನ್ ಈ ವಾರ ತೆರೆಗೆ

 

error: Content is protected !!
Scroll to Top