ಒಳಚರಂಡಿ ಯೋಜನೆಗಳ ಕುರಿತು ಸಾರ್ವಜನಿಕ ಸಮಾಲೋಚನಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28. ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2ರಡಿಯಲ್ಲಿ ಒಳಚರಂಡಿ ಯೋಜನೆಗಳ ಕುರಿತು ಮೇ 30 ರಂದು ಪೂರ್ವಾಹ್ನ 10 ಗಂಟೆಗೆ ವಾರ್ಡ್ ನಂ 26 ರ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಅಶೋಕನಗರ ದೈವಜ್ಞ ಕಲ್ಯಾಣ ಮಂಟಪದ ಹತ್ತಿರ ಆಯೋಜಿಸಲಾಗಿದೆ.

ಅಪರಾಹ್ನ 4 ಗಂಟೆಗೆ ವಾರ್ಡ್ ನಂ 27 ಮತ್ತು 28 ರ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಬೊಕ್ಕಪಟ್ಟಣದಲ್ಲಿ ಕೆಯುಐಡಿಎಫ್ ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ ಎಂದು ಆಯುಕ್ತರು ಮಂಗಳೂರು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group