ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.3.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಸಾರ್ವಜನಿಕರಿಗೆ ಮಾಹಿತಿ ನೀಡಲು ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ.

ಇಂದು  ಅಪರಾಹ್ನ 4 ಗಂಟೆಗೆ ವಾರ್ಡ್ ನಂ. 18 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕಾವೂರು ಮಾರ್ಕೆಟ್ ಬಳಿ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ.

Also Read  ಕೊರಗರ ಕಲ್ಯಾಣ ಕಾರ್ಯಕ್ರಮಗಳನ್ನು ತೀವ್ರಗೊಳಿಸಲು ಜಿ.ಪಂ ಸಿಇಓ ಸೂಚನೆ

error: Content is protected !!
Scroll to Top