ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ತಂಬಾಕು ನಿಗ್ರಹ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.ಭಾರತೀಯ ಕೃಷಿ ಸಂಶೋಧನಾ ಪರಿಷತ್‍ನ ಅಂಗ ಸಂಸ್ಥೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ “ವಿಶ್ವ ತಂಬಾಕು ಮುಕ್ತ ದಿನ” ಆಚರಿಸಲಾಯಿತು.

ಈ ವಿಶೇಷ ದಿನದ ಸಂದರ್ಭದಲ್ಲಿ ತಂಬಾಕು ಸೇವನೆಯನ್ನು ಸಂಪೂರ್ಣವಾಗಿ ಕಡಿತಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರದಿಂದ ನಿರ್ದೇಶಿಸಲ್ಪಟ್ಟ ಪ್ರತಿಜ್ಞೆಯನ್ನು ಮೀನುಗಾರಿಕಾ ಕಾಲೇಜಿನ ಡೀನ್ ರವರಾದ ಡಾ ಸೆಂಥಿಲ್ ವೆಲ್ ಎ. ರವರು ಕೇಂದ್ರದ ಮತ್ತು ಮೀನುಗಾರಿಕಾ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ವಾಚಿಸಿದರು.“ವಿಶ್ವ ತಂಬಾಕು ನಿಗ್ರಹ ದಿನವಾದಂತಹ ಇಂದು ನಾನು ದೂಮಪಾನ ಹಾಗು ಯಾವುದೇ ರೀತಿಯ ತಂಬಾಕು ಉತ್ಪನ್ನಗಳನ್ನು ಬಳಸುವುದಿಲ್ಲ. ನನ್ನ ಕುಟುಂಬ ಹಾಗು ಪರಿಚಯಸ್ಥರನ್ನು ತಂಬಾಕು ಉತ್ಪನ್ನಗಳನ್ನು ಬಳಸದಂತೆ ಪ್ರೇರೇಪಿಸುವೆ ಮತ್ತು ನನ್ನ ಕಚೇರಿಯ ಆವರಣವನ್ನು ತಂಬಾಕು ಮುಕ್ತ ವಲಯವೆಂದು ಕಾಪಾಡಿಕೊಳ್ಳುತ್ತೇನೆ ಮತ್ತು ನನ್ನ ಸಹೋದ್ಯೋಗಿಗಳಿಗೆ ಅದೇ ರೀತಿ ಪ್ರೇರಣೆ ನೀಡುತ್ತೇನೆ “ ಎಂದು ಪ್ರತಿಜ್ಞೆಯನ್ನು ಪಡೆದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎ. ಟಿ. ರಾಮಚಂದ್ರ ನಾಯ್ಕ್ರ ರವರು ತಂಬಾಕು ಮುಕ್ತ ದಿನದ ಪ್ರಾಮುಖ್ಯತೆ ತಿಳಿಸುತ್ತಾ, ವಿಶ್ವ ಆರೋಗ್ಯ ಸಂಸ್ಥೆಯಿಂದ ಗುರುತಿಸಲ್ಪಟ್ಟ ಎಂಟು ಅಧಿಕೃತ ಜಾಗತಿಕ ಸಾರ್ವಜನಿಕ ಆರೋಗ್ಯ ಪ್ರಚಾರಗಳಲ್ಲಿ ಒಂದಾದ ತಂಬಾಕು ಮುಕ್ತ ದಿನವನ್ನು ಮೇ 31 ರಂದು ಆಚರಿಸಲಾಗುತ್ತದೆ. ತಂಬಾಕು ಸೇವನೆಯ ವ್ಯಾಪಕ ಹರಡಿಕೆಯನ್ನು ಮತ್ತು ಋಣಾತ್ಮಕ ಆರೋಗ್ಯದ ಪರಿಣಾಮಗಳನ್ನು ಗಮನ ಸೆಳೆಯಲು ಈ ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ಪ್ರತಿ ವರ್ಷ 7 ದಶಲಕ್ಷಕ್ಕೂ ಹೆಚ್ಚಿನ ಜನರ ಸಾವುಗಳಿಗೆ ಕಾರಣವಾಗುತ್ತದೆ ಹಾಗು ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಮಾಹಿತಿಯ ಪ್ರಕಾರ ಪ್ರತಿವರ್ಷ ಜಗತ್ತಿನಾದ್ಯಂತ 8 ಲಕ್ಷಕ್ಕೂ ಹೆಚ್ಚು ಪರೋಕ್ಷ ಧೂಮಪಾನಿಗಳು ಸಾವನ್ನಪ್ಪುತ್ತಿದ್ದಾರೆ.

ಕಳೆದ 21 ವರ್ಷಗಳಲ್ಲಿ ತಂಬಾಕು ಮುಕ್ತ ದಿನವನ್ನು ಸರ್ಕಾರಗಳು, ಸಾರ್ವಜನಿಕ ಆರೋಗ್ಯ ಸಂಘಟನೆಗಳು, ಧೂಮಪಾನಿಗಳು ಮತ್ತು ತಂಬಾಕು ಉದ್ಯಮದಿಂದ ಜಗತ್ತಿನಾದ್ಯಂತ ಬೆಂಬಲವನ್ನು ವ್ಯಕ್ತಪೀಡಿಸುತಿದ್ದಾರೆಂದು ತಿಳಿಸಿದರು. ಮೀನುಗಾರಿಕಾ ಕಾಲೇಜಿನ ಮಾಜಿ ಡೀನ್ ಹಾಗು ಜಲ ಸಂಪನ್ಮೂಲ ನಿರ್ವಹಣೆ ವಿಭಾಗದ ಮುಖ್ಯಸ್ಥ ಡಾ ಎಸ್. ಎಂ.ಶಿವಪ್ರಕಾಶ ಮತ್ತು ಜಲಜೀವಿ ಅರೋಗ್ಯ ನಿರ್ವಹಣೆ ವಿಭಾಗದ ಮುಖ್ಯಸ್ಥರು ಡಾ ಕೆ. ಯಸ್. ರಮೇಶ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬೇಸಾಯ ಶಾಸ್ತ್ರದ ವಿಜ್ಞಾನಿ. ಹರೀಶ್ ಶೆಣೈ ಸ್ವಾಗತಿಸಿದರು ಮತ್ತು ಮೀನುಗಾರಿಕೆ ತಜ್ಞ ಡಾ ಚೇತನ್ ಏನ್ ರವರು ವಂದಿಸಿದರು.

error: Content is protected !!

Join the Group

Join WhatsApp Group