ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೋರು ಮಾಡಲು ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2019- 20 ನೇ ಶೈಕ್ಷಣಿಕ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿಧ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.





ಹಾಗೂ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೊಮಾ, ಜೆ ಓ ಸಿ, ಪ್ರೋಪೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶಿಷ್ಯವೇತನ ಮಂಜೋರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರಿಂದ ಪಡೆಯಬಹುದು ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.






error: Content is protected !!
Scroll to Top