ಜಗನ್ ರೆಡ್ಡಿಯನ್ನು ವಿಜಯವಾಡದಲ್ಲಿ ಭೇಟಿಯಾದ ನಿಖಿಲ್ ಕುಮಾರಸ್ವಾಮಿ➤ಜೆಡಿಎಸ್ ಯುವ ನಾಯಕನಿಗೆ ಸಿಕ್ತು ಆಂಧ್ರ ಸಿ.ಎಂನಿಂದ ಸಲಹೆ

(ನ್ಯೂಸ್ ಕಡಬ) newskadaba.com ಮಂಡ್ಯ, ಜೂನ್.13. ಈ ಬಾರಿ ಮಂಡ್ಯ ಚುನಾವಣೆಯಲ್ಲಿ ಸುಮಲತಾ ಅಂಬರೀಷ್​ ವಿರುದ್ಧ ಸೋತಿದ್ದ ಜೆಡಿಎಸ್​ನ ಯುವ ನಾಯಕ ನಿಖಿಲ್​ ಕುಮಾರಸ್ವಾಮಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಅವರನ್ನು ವಿಜಯವಾಡದಲ್ಲಿ ಭೇಟಿಯಾಗಿ ಸಿಎಂ ಸ್ಥಾನ ಅಲಂಕರಿಸಿದ್ದಕ್ಕಾಗಿ ಅವರನ್ನು ಅಭಿನಂದಿಸಿದರು.

ಆಂಧ್ರದಲ್ಲಿ ಜಗನ್​ ಅಣ್ಣಾ ಎಂದೇ ಅವರು ಪರಿಚಿತರಾಗಿದ್ದಾರೆ. ಅವರ ಹತ್ತು ವರ್ಷಗಳ ಸುದೀರ್ಘ ಹೋರಾಟದ ದಾರಿ ಎಲ್ಲ ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಹಾಗೇ ಜಗನ್​ ಮೋಹನ್​ ರೆಡ್ಡಿಯವರು ಕರ್ನಾಟಕ ರಾಜಕಾರಣವನ್ನು, ಇಲ್ಲಿನ ಸನ್ನಿವೇಶಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಹೀಗೆಂದು ಅವರೇ ನನ್ನ ಬಳಿ ಹೇಳಿಕೊಂಡಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಯಾವುದಕ್ಕೂ ಹಿಂಜರಿಯದೆ ಜನಸೇವೆಯನ್ನೇ ಗುರಿಯಾಗಿಟ್ಟುಕೊಂಡು ಮುಂದುವರಿಯಲು ಸಲಹೆ ನೀಡಿದರು. ಅಲ್ಲದೆ ರಾಜಕೀಯದಲ್ಲಿ ಉತ್ತಮ ಭವಿಷ್ಯ ಹೊಂದುವಂತೆ ಹಾರೈಸಿದರು ಎಂದು ಈ ಬಗ್ಗೆ ಫೇಸ್​ಬುಕ್​ನಲ್ಲಿ ನಿಖಿಲ್ ಕುಮಾರಸ್ವಾಮಿ ತಮ್ಮ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿಯವರನ್ನು ಭೇಟಿಯಾದ ಬಗ್ಗೆ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group