ಯೋಗ ಜೀವನ ಅವಿಭಾಜ್ಯ ಅಂಗವಾಗಲಿ ➤ದೇಲಂಪಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಜಿಲ್ಲಾಡಳಿತ, ಆಯುಷ್ ಇಲಾಖೆ ಮತ್ತು ಜಿಲ್ಲಾ ಗೃಹರಕ್ಷಕ ದಳದ ಇವರ ಸಹಯೋಗದಲ್ಲಿ ಜೂನ್ 21ರಂದು ಆಚರಿಸುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಜೂನ್ 15 ರಂದು ಪೂರ್ವಾಹ್ನ 7 ಗಂಟೆಗೆ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಯೋಗ ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರ ಮಾರ್ಗದರ್ಶನದಲ್ಲಿ ತರಬೇತಿ ಶಿಬಿರ ನಡೆಯಿತು.


ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ. ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು ಪ್ರತಿಯೊಬ್ಬರು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗೋಪಾಲಕೃಷ್ಣ ದೇಲಂಪಾಡಿ ಅವರು ಕರೆ ನೀಡಿದರು. ದಿನದ 8 ಗಂಟೆಗಳ ಕಾಲ ನಿಂತುಕೊಂಡು ಒತ್ತಡದ ಕೆಲಸ ಮಾಡುವ ಗೃಹರಕ್ಷಕರಿಗೆ ಯೋಗ ಅತ್ಯಂತ ಅನಿವಾರ್ಯ ಎಂದು ಅವರು ನುಡಿದರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಹಾಗೂ ಸುಮಾರು 25 ಮಂದಿ ಗೃಹರಕ್ಷಕರು ಈ ಶಿಬಿರದಲ್ಲಿ ಭಾಗವಹಿಸಿದರು.

error: Content is protected !!

Join the Group

Join WhatsApp Group