ಮೊಬೈಲ್ ಸೇವೆಯಲ್ಲಿ ವ್ಯತ್ಯಯ ➤ಬೇಸತ್ತ ಹರಿಹರ ಪಳ್ಳತ್ತಡ್ಕ ಗ್ರಾಮಸ್ಥರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂನ್.19.ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್‌ ಮೊಬೈಲ್‌ ಟವರ್‌ ಹರಿಹರ ಪಳ್ಳತ್ತಡ್ಕ ಗ್ರಾಮದಲ್ಲಿ ಕಳೆದ 8 ತಿಂಗಳಿಂದ ಸರಿಯಾಗಿ ಕಾರ್ಯಾಚರಿಸುತ್ತಿರಲಿಲ್ಲ. ಇದರಿಂದ ಬೇಸತ್ತ ಹರಿಹರ ಪಳ್ಳತ್ತಡ್ಕ ಗ್ರಾಮಸ್ಥರು ಮಂಗಳವಾರ ಮೊಬೈಲ್‌ ಟವರಿಗೆ ತರಕಾರಿ ಗಿಡಗಳನ್ನು ಹಬ್ಬಿಸುವ ಮೂಲಕ ವಿನೂತನ ಶೈಲಿಯಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಟವರ್‌ನ ಸಿಗ್ನಲ್‌ ಸಮಸ್ಯೆ ಸರಿಪಡಿಸುವಂತೆ ಗ್ರಾಮಸ್ಥರು ಅನೇಕ ಬಾರಿ ಅಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸರಿಯಾಗಿರಲಿಲ್ಲ. ಇದಕ್ಕೆ ಬೇಸತ್ತ ಗ್ರಾಮಸ್ಥರು ಉಪಯೋಗಕ್ಕೆ ಬಾರದ ಮೊಬೈಲ್‌ ಟವರಿಗೆ ತರಕಾರಿ ಗಿಡಗಳನ್ನು ನೆಟ್ಟು ಪ್ರತಿಭಟಿಸಿದರು.ಈ ಭಾಗದಲ್ಲಿ ಬಿಎಸ್ಸೆನ್ನೆಲ್‌ ಹೊರತುಪಡಿಸಿ ಬೇರೆ ಖಾಸಗಿ ಮೊಬೈಲ್‌ ಸೇವೆಗಳೂ ಇಲ್ಲ. ಇತ್ತೀಚಿನ ದಿನಗಳಲ್ಲಿ ಇಲ್ಲಿರುವ ಏಕಮಾತ್ರ ಸರಕಾರಿ ಸ್ವಾಮ್ಯದ ಮೊಬೈಲ್‌ ಸಿಗ್ನಲ್‌ ದಿನದ ಬಹುತೇಕ ಹೊತ್ತು ಕಣ್ಮರೆಯಾಗುತ್ತಿದೆ. ಮೊದಲೆಲ್ಲ ವಿದ್ಯುತ್ತಿದ್ದಾಗ ಇರುತಿದ್ದ ಸಿಗ್ನಲ್‌ ಪ್ರಸ್ತುತ ಕರೆಂಟಿದ್ದರೂ ಸ್ಥಗಿತಗೊಳ್ಳುತ್ತಿದೆ. ಹೀಗಾಗಿ ಇಲ್ಲಿನ ಟವರ್‌ ನೆಪಮಾತ್ರಕ್ಕೆ ಇದ್ದಂತ್ತಿದೆ.

Also Read  ಬಿಸಿಲಿನ ಕಾವು ಹೆಚ್ಚಳದ ಸಾಧ್ಯತೆ ➤ ದ.ಕ ಜಿಲ್ಲಾಧಿಕಾರಿಯಿಂದ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಪ್ರಕಟ

ಇದರಿಂದ ಬೇಸತ್ತು ಗ್ರಾಮಸ್ಥರು ಅಧಿಕಾರಿಗಳ, ಜನಪ್ರತಿನಿಧಿಗಳ ಗಮನ ಸೆಳೆಯಲು ಶಾಂತಿಯುತವಾಗಿ ಈ ಪ್ರತಿಭಟನೆ ಹಮ್ಮಿಕೊಂಡಿದ್ದರು.ಇಲ್ಲಿನ ಮೊಬೈಲ್‌ ಟವರ್‌ ಸೇವೆ ಅಗತ್ಯಕ್ಕೆ ಸಿಗುತ್ತಿಲ್ಲ. ಟವರಿನ ಸಿಗ್ನಲ್‌ ಸರಿಪಡಿಸುವಂತೆ ಎಲ್ಲ ಪ್ರಯತ್ನ ನಡೆಸಿದ ಮೇಲೆಯೂ ಸರಿ ಹೋಗಿಲ್ಲ. ಮುಂದೆ ಬಳಕೆಗೆ ಸಿಗದ ಟವರ್‌ ಸ್ಥಳಾಂತರಕ್ಕೆ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನೆಯಲ್ಲಿದ್ದ ನೂಪ ಮಲ್ಲಾರ ತಿಳಿಸಿದರು. ಪ್ರತಿಭಟನೆಯಲ್ಲಿ ಮಧುಸೂದನ ಕಾಪಿಕಾಡು, ಸಂತೋಷ ಪಳಂಗಾಯ, ಬಾಲಸುಬ್ರಹ್ಮಣ್ಯ ಎಂ., ಲವ ಮಲ್ಲಾರ, ಕುಸುಮಾಧರ ಐಪಿನಡ್ಕ, ಉಮೇಶ್‌ ಕಜೋಡಿ, ಉಲ್ಲಾಸ ಮುಚ್ಚಾರ, ಯೋಗಿಶ್‌ ಮೆತ್ತಡ್ಕ, ಪ್ರಸಾದ್‌ ತಂಟೆಪ್ಪಾಡಿ, ಸೋಮಶೇಖರ ಬಟ್ಟೋಡಿ, ಹವೀನ್‌ ಕಲ್ಲೆಮಠ, ನಂದನ್‌, ಬಾಲಕೃಷ್ಣ ಉಪಸ್ಥಿತರಿದ್ದರು.

 

error: Content is protected !!
Scroll to Top