(ನ್ಯೂಸ್ ಕಡಬ) newskadaba.com ಲಕ್ನೋ, ಜೂನ್.24. ಬಿಎಸ್ಪಿ ಅಧಿನಾಯಕಿ ಮಾಯಾವತಿ ಅವರು ಟ್ವೀಟರ್ನಲ್ಲಿ ಲೋಕಸಭಾ ಚುನಾವಣೆ ಬಳಿಕ ಸಮಾಜವಾದಿ ಪಕ್ಷದ ವ್ಯವಹಾರ ನಮಗೆ ಹೀಗೆ ಮಾಡಿದರೆ ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಎಂದು ಯೋಚಸುವಂತೆ ಮಾಡಿದೆ.

ಪಕ್ಷದ ಹಿತದೃಷ್ಟಿಯಿಂದ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟ ನಡೆಸುತ್ತೇವೆ ಎಂದು ಬರೆದಿದ್ದಾರೆ.2012 ರಿಂದ 17 ರ ವರೆಗೆ ಅಖೀಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಸರ್ಕಾರವಿದ್ದ ವೇಳೆ ನಡೆದ ದಲಿತರು ಮತ್ತು ಬಿಎಸ್ಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯಗಳು ನಮ್ಮ ಸೋಲಿಗೆ ಕಾರಣವಾಯಿತು ಎಂದು ಹೇಳಿಕೊಂಡಿದ್ದಾರೆ.










