ಕೊಣಾಜೆ: ಕಾಲೇಜು ವಿದ್ಯಾರ್ಥಿನಿಗೆ ಚೂರಿಯಿಂದ ಇರಿದ ಯುವಕ ➤ ಕುತ್ತಿಗೆ ಕೊಯ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಭೂಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ‌.28. ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಯುವಕನೋರ್ವ ಚೂರಿಯಿಂದ ಇರಿದು ಆ ಬಳಿಕ ತಾನೂ ಕುತ್ತಿಗೆ ಭಾಗಕ್ಕೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಇರಿತ್ತಕ್ಕೊಳಗಾದ ಯುವತಿಯನ್ನು ನಗರದ ಖಾಸಗಿ ಕಾಲೇಜೊಂದರ ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿನಿ, ಬಗಂಬಿಲ ನಿವಾಸಿ ದೀಕ್ಷಾ ಎಂದು ಗುರುತಿಸಲಾಗಿದೆ. ಚೂರಿ ಇರಿದ ಯುವಕನನ್ನು ಮಂಗಳೂರು ಶಕ್ತಿನಗರ ನಿವಾಸಿ ಸುಶಾಂತ್ ಎಂದು ಗುರುತಿಸಲಾಗಿದ್ದು, ಶುಕ್ರವಾರ ಸಂಜೆ ದೀಕ್ಷಾ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬೈಕಿನಲ್ಲಿ ಬಂದ ಆರೋಪಿ ಸುಶಾಂತ್ ದೀಕ್ಷಾಳ ಕಾಲು, ಎದೆ, ಹೊಟ್ಟೆಯ ಭಾಗಕ್ಕೆ ಚೂರಿಯಿಂದ ಇರಿದಿದ್ದಾನೆ. ಬಳಿಕ ತಾನೂ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಗಂಭೀರ ಗಾಯಗೊಂಡ ಇಬ್ಬರನ್ನೂ ಕೂಡಲೇ ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕಡಬ ಪಟ್ಟಣ ಪಂಚಾಯತ್ ನಿಂದ ತೆರಿಗೆ ಏರಿಸಿ ಸಾರ್ವಜನಿಕರಿಗೆ ತೊಂದರೆ ➤ ಪಟ್ಟಣ ಪಂಚಾಯಿತಿ ವಿರುದ್ಧ ಇಂದು ಕಡಬದಲ್ಲಿ ಪ್ರತಿಭಟನೆ

error: Content is protected !!
Scroll to Top