ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯುವುದು.

ಅರ್ಜಿಗಳನ್ನು ಜುಲೈ 12 ರೊಳಗೆ ಪಡೆಯಬೇಕು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 22 ರೊಳಗೆ ಸಲ್ಲಿಸಬೇಕು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಸಾಮಾನ್ಯ ಅರ್ಹತೆಗಳು: ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ: ಸಕಇ/225/ಬಿಸಿಎ/2000 ದಿನಾಂಕ:30/03/2002 ರನ್ವಯ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿದಾರರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು ಹಾಗೂ ಒಂದೇ ಕಡೆ ಹೊಂದಿಕೊಂಡಿರುವಂತೆ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.

(ಉತ್ತರಕನ್ನಡ, ದಕ್ಷಿಣಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು). ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.ರಾಜ್ಯ ಸರ್ಕಾರದ ಯೋಜನೆಗಳ ವಿವರ: ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ, ಕಮ್ಮಾರಿಕೆ, ಅಕ್ಕಸಾಲಿ ಮತ್ತು ಬಡಗಿ ಉದ್ಯಮಿಗಳಿಗೆ ತರಬೇತಿ ಮತ್ತು ಸಾಲ ಯೋಜನೆ.

ರಾಜ್ಯ ಸರ್ಕಾರದ ಯೋಜನೆಗಳಿಗೆ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ.40,000/-ಗಳಿಗಿಂತ ಹಾಗೂ ಪಟ್ಟಣ ಪ್ರದೇಶದವರಿಗೆ ರೂ.55,000/-ಗಳಿಗಿಂತ ಕಡಿಮೆ ಇರಬೇಕು. (ಅರಿವು ಯೋಜನೆಗೆ ವಾರ್ಷಿಕ ವರಮಾನವು ರೂ.3.50ಲಕ್ಷಗಳ ಮಿತಿ ಇರಬೇಕು). ಅರ್ಜಿಯನ್ನು ನಿಗಮದ ಜಿಲ್ಲಾ ವ್ಯವಾಸ್ಥಾಪಕರ ಕಚೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಹಾಗೂwebsite:www.karnataka.gov.in/kvcdcl  ರಲ್ಲಿ ಪಡೆಯಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group