ವಿಕಲಚೇತನರ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.2019-20ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸಾಧನ ಸಲಕರಣೆಗಳು, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಸ್ಪಾರ್ಧಾ ಚೇತನ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Also Read  ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ

ವಿಕಲಚೇತನರು ಕಲ್ಯಾಣಾಧಿಕಾರಿಗಳ ಕಚೇರಿಗೆ ಅಥವಾ ತಾಲ್ಲೂಕಿನ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಲ್ಲಿ ಅಥವಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 30.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತರ ಕಲ್ಯಾಣಾಧಿಕಾರಿಯವರ ಕಚೇರಿಯನ್ನು Website:-www.dwdsc.kar.nic.in, ದೂರವಾಣಿ ಸಂಖ್ಯೆ: 0824-2458173/2455999 ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯನಾಗರಿಕರ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top