ಸಚಿವ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಸಂದೇಶ ► ಸಚಿವರ ಹಿತೈಷಿಯ ದೂರಿನನ್ವಯ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.12. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ ‍ಘಟನೆ ಶುಕ್ರವಾರದಂದು ನಡೆದಿದೆ.

ಬಂಧಿತನನ್ನು ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ದಿವ್ಯ ಪ್ರಸಾದ್ (35) ಎಂದು ಗುರುತಿಸಲಾಗಿದ್ದು, ಈತನನ್ನು ಬಂಧಿಸಿದ ಕದ್ರಿ ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿ ಸೆಕ್ಷನ್ 507 ಐಪಿಸಿ ಮತ್ತು 67 ಐಟಿ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು ವಾರಗಳ ಹಿಂದೆ ‘ಹಲೋ ಮಂತ್ರಿ’ ಕಾರ್ಯಕ್ರಮದ ಪೋಸ್ಟ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಲಾಗಿತ್ತು. ಆ ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್ ಭಾಗವಹಿಸಿದ್ದರು. ಸಚಿವ ಖಾದರ್ ವಿರುದ್ಧ ದಿವ್ಯ ಪ್ರಸಾದ್‌ ಅವಹೇಳನಕಾರಿಯಾಗಿ ಪ್ರತಿಕ್ರಿಯೆ ನೀಡಿದ್ದರು. ಈ ಬಗ್ಗೆ ದಿವ್ಯ ಪ್ರಸಾದ್ ವಿರುದ್ಧ ಸಚಿವರ ಹಿತೈಷಿ ಬೊಳಿಯಾರ್‌ನ ಅಶ್ರಫ್ ಮೋನು ಎಂಬವರು ಕದ್ರಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯನ್ನು ಬಂಧಿಸಿರುವ ಕದ್ರಿ ಪೊಲೀಸರು

error: Content is protected !!
Scroll to Top