ಪುತ್ತೂರು: ನವವಿವಾಹಿತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.14. ಕಳೆದ ಎಪ್ರಿಲ್ ತಿಂಗಳಿನಲ್ಲಿ ಮದುವೆಯಾಗಿದ್ದ ನವ ವಿವಾಹಿತ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿಗೆ ಸಮೀಪದ ಬೀರುಮಲೆ ಗುಡ್ಡದಲ್ಲಿ ಭಾನುವಾರದಂದು ಕಂಡುಬಂದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕೋಡಿಂಬಾಡಿ ಗ್ರಾಮದ ನಿಡ್ಯ ನಿವಾಸಿ ಕೇಶವ ಗೌಡ (30) ಎಂದು ಗುರುತಿಸಲಾಗಿದೆ. ಬಡಗಿ ಕೆಲಸ ಮಾಡುತ್ತಿದ್ದ ಕೇಶವ ಕೆಲಸದ ನಿಮಿತ್ತ ಶನಿವಾರದಂದು ಬೆಳಗ್ಗೆ ಮನೆಯಿಂದ ಹೊರ ಹೋದವರು ರಾತ್ರಿಯಾದರೂ ಮನೆಗೆ ಆಗಮಿಸಿದೇ ಇದ್ದಾಗ ಮನೆಯವರು ಹುಡುಕಾಟ ಆರಂಭಿಸಿದ್ದರು. ಭಾನುವಾರದಂದು ಬೆಳಗ್ಗೆ ಬಿರುಮಲೆ ಗುಡ್ಡೆಯ ನೀರು ಸರಬರಾಜಿನ ವ್ಯಕ್ತಿಯೊಬ್ಬರು ಗುಡ್ಡದ ತುದಿಯಲ್ಲಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವೊಂದು ನೇತಾಡುತ್ತಿರುವುದನ್ನು ಗಮನಿಸಿ ಪುತ್ತೂರು ಠಾಣೆಗೆ ಸುದ್ದಿ ಮುಟ್ಟಿಸಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

error: Content is protected !!
Scroll to Top