ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಕುರಿತು ಮಾಹಿತಿ ನೀಡಲು ಸಭೆಯನ್ನು ಆಯೋಜಿಸಲಾಗಿದೆ.

ಇಂದು ಸಂಜೆ 4 ಗಂಟೆಗೆ ವಾರ್ಡ್ ನಂ 8 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ ಕುಳಾಯಿ ಮಹಿಳಾ ಮಂಡಳಿಯಲ್ಲಿ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ.ಈ ಸಭೆಗೆ ವಾರ್ಡ್‍ನ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಆಗಮಿಸಿ ಕಾಮಗಾರಿಗಳ ಸಮರ್ಪಕ ನಿರ್ವಹಣೆಗೆ ಸಲಹೆ ಮತ್ತು ಸೂಚನೆಗಳನ್ನು ನೀಡಲು ಆಯುಕ್ತರು ಮಂಗಳೂರು ಮಹಾನಗರ ಪಾಲಿಕೆ ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group