ತಡ ರಾತ್ರಿ ಮುಂಬೈನಿಂದ ಬೆಂಗಳೂರಿಗೆ ಅನರ್ಹ ಶಾಸಕರ ಆಗಮನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.29.ಅನರ್ಹಗೊಂಡ ಶಾಸಕರು  ಸ್ಪೀಕರ್ ರಮೇಶ್ ಕುಮಾರ್ ಅನರ್ಹತೆ ಆದೇಶ ಹೊರಡಿಸಿದ ಬೆನ್ನಲ್ಲೆ ಮುಂಬೈನಿಂದ ತಂಡವಾಗಿ ಬೆಂಗಳೂರಿಗೆ ಆಗಮಿಸಿದೆ.

ಮುನಿರತ್ನ ಹಾಗೂ ಶಿವರಾಮ್ ಹೆಬ್ಬಾರ್ ಇಬ್ಬರೂ ಮುಂಬೈನಿಂದ ಒಂದೇ ವಿಮಾನದಲ್ಲಿ ಆಗಮಿಸಿದ್ದಾರೆ. ಅವರ ನಂತರ ಮತ್ತೊಂದು ವಿಮಾನದಲ್ಲಿ ಎಸ್.ಟಿ ಸೋಮಶೇಖರ್, ಬೈರತಿ ಬಸವಾರಾಜ್, ಗೋಪಾಲಯ್ಯ ಹಾಗೂ ಎಂ.ಟಿ.ಬಿ ನಾಗರಾಜ್ ಬೆಂಗಳೂರಿಗೆ ಆಗಮಿಸಿದ್ದಾರೆ.ಭಾನುವಾರ  ತಡ ರಾತ್ರಿ  ಅನರ್ಹಗೊಂಡ ಶಾಸಕರು  ಮುಂಬೈನಿಂದ ತಂಡವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ.

error: Content is protected !!
Scroll to Top