ನೆಲ್ಯಾಡಿ: ಟ್ಯಾಂಕರ್ ಪಲ್ಟಿ – ಗ್ಯಾಸ್ ಸೋರಿಕೆ ➤ ಉಪ್ಪಿನಂಗಡಿ – ನೆಲ್ಯಾಡಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.02. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ರೆಖ್ಯ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ತೆರಳುತ್ತಿದ್ದ ಟ್ಯಾಂಕರ್ ರೆಖ್ಯ ಸಮೀಪದ ತಿರುವಿನಲ್ಲಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ಪರಿಣಾಮ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಪರ್ಯಾಯವಾಗಿ ಗುಂಡ್ಯ ಹಾಗೂ, ಇಚಿಲಂಪಾಡಿ – ಮರ್ಧಾಳ – ಉಪ್ಪಿನಂಗಡಿ ಮಾರ್ಗಗಳನ್ನು ಗುರುತಿಸಲಾಗಿದೆ.

error: Content is protected !!
Scroll to Top