ಪವಿತ್ರ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ➤ ಕ್ಷೇತ್ರದ ಸ್ನಾನ ಘಟ್ಟ ನೆರೆಯಿಂದಾಗಿ ಸಂಪೂರ್ಣ ಮುಳುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹರಿಯುತ್ತಿರುವ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು,ಭಕ್ತಾದಿಗಳು ನೀರಿಗೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ.

ಕಳೆದೆರಡು ದಿನಗಳಿಂದ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ವರ್ಷದಲ್ಲಿ ಮೊದಲ ಸಲ ಸ್ನಾನ ಘಟ್ಟ ಮುಳುಗಡೆಯಾಗಿದೆ.ಕ್ಷೇತ್ರದ ಸ್ನಾನ ಘಟ್ಟ ನೆರೆಯಿಂದಾಗಿ ಸಂಪೂರ್ಣ ಮುಳುಗಡೆಗೊಂಡಿದೆ. ಕುಮಾರಧಾರ ನದಿ ನೀರು ತುಂಬಿ ಹರಿಯುತ್ತಿದೆ. ಎಡೆಬಿಡದೆ ಮಳೆ ಸುರಿಯುತ್ತಿದ್ದು,ನೀರಿನ ಮಟ್ಟ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

Also Read  ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

 

error: Content is protected !!
Scroll to Top