ನೆಹರು ಯುವ ಕೇಂದ್ರ ಮಂಗಳೂರು ➤ ಒಂದು ದಿನದ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.10.ನೆಹರು ಯುವ ಕೇಂದ್ರ ಮಂಗಳೂರು, ಸ್ಕೂಲ್ ಆಫ್ ಸೋಶಿಯಲ್ ವರ್ಕ್, ರೋಶನಿ ನಿಲಯ ಮಂಗಳೂರು ಇವರ ವತಿಯಿಂದ ವಿಶ್ವ ಯುವ ದಿನಾಚರಣೆಯ ಕುರಿತು ಒಂದು ದಿನದ ಕಾರ್ಯಾಗಾರವು ಇಂದು ಬೆಳಿಗ್ಗೆ 10 ಗಂಟೆಗೆ ರೋಶನಿ ನಿಲಯದಲ್ಲಿ ನಡೆಯಲಿದೆ.


ಕಾರ್ಯಾಗಾರವನ್ನು ದ.ಕ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಇವರು ಉದ್ಘಾಟಿಸಲಿದ್ದಾರೆ. ಮಂಗಳೂರು ವಿವಿ ರಿಜಿಸ್ಟ್ರಾರ್ ಎ.ಎಂ ಖಾನ್ ಅಧ್ಯಕ್ಷತೆ ವಗಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪೊಲೀಸ್ ಅಧೀಕ್ಷಕರಾದ ಬಿ.ಎಂ ಲಕ್ಷ್ಮೀ ಪ್ರಸಾದ್ ಇವರು ಭಾಗವಹಿಸಲಿದ್ದಾರೆ.

Scroll to Top