ಬಂಟ್ವಾಳ ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.2019-20ನೇ ಸಾಲಿನ ಬಂಟ್ವಾಳ ತಾಲೂಕು ಪಂಚಾಯತ್‍ನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆಯನ್ನು ಆಯೋಜಿಸಲಾಗಿದೆ.

 

ಆಗಸ್ಟ್ 27 ಬೆಳಿಗ್ಗೆ 10.30 ಗಂಟೆಗೆ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ, ಬಂಟ್ವಾಳ ಶಾಸಕರಾಜೇಶ್ ನಾಯ್ಕ್ ಉಳಿಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.

 

Scroll to Top