ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ➤ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಮುದಾಯ ಭವನದ ಸಭಾಂಗಣ ಮಂಗಳೂರು ಇಲ್ಲಿ ಸನ್ಮಾನ ಸಮಾರಂಭವು ಆಗಸ್ಟ್ 25ರಂದು ಬೆಳಿಗ್ಗೆ 10.30 ಗಂಟೆಗೆ  ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಎನ್. ಸೀತಾರಾಮ ವಹಿಸಲಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ಅಸೋಸಿಯೆಟ್ ಪ್ರೋಫೆಸರ್ ಡಾ. ದಯಾನಂದ ನಾಯ್ಕ್ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ್ ರಾವ್ ಹಾಗೂ 75 ವರ್ಷ ಮೀರಿದ ಹಿರಿಯ ಪಿಂಚಣಿದಾರರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Also Read  ಉಡುಪಿ ಜಿಲ್ಲೆಯಲ್ಲಿಂದು 117 ಜನರಿಗೆ ಸೋಂಕು ದೃಢ

error: Content is protected !!
Scroll to Top