ಅಂತರ್ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ➤ ಜ್ಞಾಜೋದಯ ಬೆಥನಿ ದ್ವಿತೀಯ

(ನ್ಯೂಸ್ ಕಡಬ) newskadaba.comನೆಲ್ಯಾಡಿ, ಆಗಸ್ಟ್.22.ಕೇರಳದ ಕೋಟ್ಟಯಂನಲ್ಲಿ ನಡೆಸಲ್ಪಟ್ಟ ಅಂತರ್ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷ ವಿಜ್ಞಾನ ವಿಭಾಗ ವಿದ್ಯಾರ್ಥಿಗಳಾದ ನವೀನ್ ಹಾಗೂ ನವನೀತ್ ಇವರು ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಬೆಥನಿ ಆಶ್ರಮದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕೇರಳದ ಕೋಟ್ಟಯಂನಲ್ಲಿ ನಡೆಸಲ್ಪಟ್ಟ ಅಂತರ್ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಸಂಸ್ಥೆಯ ಹಿರಿಮೆಗೆ ಹೊಸ ಗರಿ ಮೂಡಿಸಿದ್ದಾರೆ. ಇವರನ್ನು ಸಂಸ್ಥೆಯ ಸಂಚಾಲಕರಾದ ರೆ|ಡಾ|ಫಾ| ವರ್ಗೀಸ್ ಕೈಪನಡುಕ್ಕ ಒಐಸಿ, ಪ್ರಾಂಶುಪಾಲರಾದ ರೆ|ಫಾ| ಮ್ಯಾಥ್ಯೂ ಪ್ರಫೂಲ್ ಒಐಸಿ ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದರು.

Also Read  ಕಡಬ ಎಸ್ಎಮ್ಎ ರೀಜನಲ್ ಮಹಾಸಭೆ, ಸಮಿತಿ ಪುನಃರಚನೆ ► ಪ್ರತಿಭಾನ್ವಿತರಿಗೆ ಸ್ಮರಣಿಕೆ ನೀಡಿ ಗೌರವ

error: Content is protected !!
Scroll to Top