ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ಕೆಲಸಕ್ಕೆಂದು ಹೈದರಾಬಾದ್‍ಗೆ ಹೋದ ನಗರದ ವ್ಯಕ್ತಿ ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ಕೃಷ್ಣರಾಜ್  (45) ಕಾಣೆಯಾದ ವ್ಯಕ್ತಿ. ಇವರು 7 ತಿಂಗಳ ಹಿಂದೆ ಕೆಲಸಕ್ಕೆ ಬೆಂಗಳೂರಿಗೆ ತೆರಳಿದ್ದು, ಅಲ್ಲಿಂದ ಹೈದರಾಬಾದ್‍ಗೆ ಹೋಗಿದ್ದರು. ನಂತರ ಯಾವುದೇ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಅವರ ಪತ್ನಿ ದೂರು ನೀಡಿದ್ದಾರೆ. ಇವರು ಬಿಳಿ ಮೈಬಣ್ಣ, ಸಪೂರ ಶರೀರ, ಎತ್ತರ 5.10 ಅಡಿ ಹೊಂದಿದ್ದು,ಕನ್ನಡ, ಹಿಂದಿ, ತುಳು, ಬ್ಯಾರಿ ಭಾಷೆ ಮಾತನಾಡಬಲ್ಲರು. ಧರಿಸಿದ್ದ ಬಟ್ಟೆ- ಜೀನ್ಸ್ ಪ್ಯಾಂಟ್ ಮತ್ತು ಶರ್ಟ್.
ಈ ಚಹರೆಯುಳ್ಳ ವ್ಯಕ್ತಿಯ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು ಮಂಗಳೂರು ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 2220520 ಅಥವಾ ಜಿಲ್ಲಾ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 2220800-2220801 ಇಲ್ಲಿಗೆ ಮಾಹಿತಿ ನೀಡಬೇಕಾಗಿ ಠಾಣಾಧಿಕಾರಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group