ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಧಾನಪರಿಷತ್ ಸದಸ್ಯರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಅವರ 2018-19 ನೇ ಸಾಲಿನ ಅನುದಾನದಲ್ಲಿ ಮಂಗಳೂರು ತಾಲೂಕಿನ ಬಜ್ಪೆ ಬಸ್ ನಿಲ್ದಾಣದ ಕಾಂಕ್ರೀಟೀಕರಣ ಕಾಮಗಾರಿಗೆ ರೂ.5 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.


ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಚಂದ್ರ ಶೆಟ್ಟಿ ಅವರ 2017-18ನೇ ಸಾಲಿನ ಅನುದಾನದಲ್ಲಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ಧರೆಗುಡ್ಡೆ ಗ್ರಾಮದ ಗುರುಬೆಟ್ಟು ಎನ್ನವ ಸ್ಥಳದಲ್ಲಿ ಕುಡಿಯುವ ನೀರಿನ ಕೊಳವೆ ಬಾವಿ ಮತ್ತು ಪೈಪ್ ಲೈನ್ ವಿಸ್ತರಣೆಯ ಕಾಮಗಾರಿಗೆ ರೂ.2 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ 2017-18ನೇ ಸಾಲಿನ ಅನುದಾನದಲ್ಲಿ ಮಂಗಳೂರು ತಾಲೂಕು ಮೂಡಬಿದ್ರೆ ಪಂಚಾಯತ್ ವ್ಯಾಪ್ತಿಯ ಹೊಸಬೆಟ್ಟು ಚರ್ಚ್ ಬಳಿ ಹೈಮಾಸ್ಟ್ ದೀಪದ ಅಳವಡಿಕೆ ಕಾಮಗಾರಿಗೆ ರೂ.1.30 ಲಕ್ಷ , ಮಂಗಳೂರು ತಾಲೂಕು ಮೂಡಬಿದ್ರೆ ಪುರಸಭಾ ವ್ಯಾಪ್ತಿಯ ಅಲಂಗಾರು ಚರ್ಚ್ ಬಳಿ ಹೈಮಾಸ್ಟ್ ದೀಪದ ಅಳವಡಿಕೆಗೆ ರೂ.1.30 ಲಕ್ಷ, ಮಂಗಳೂರು ತಾಲೂಕು ಬೆಳುವಾಯಿ ಪಂಚಾಯತ್ ವ್ಯಾಪ್ತಿಯ ಕೆಸರ್ ಗದ್ದೆ ರಿಕ್ಷಾ ಪಾರ್ಕ್ ಬಳಿ ಹೈಮಾಸ್ಟ್ ದೀಪದ ಅಳವಡಿಕೆಗೆ ರೂ.1.30 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group