ಮಂಗಳೂರು: ಗೃಹರಕ್ಷಕದಳ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ .16, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ  71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿ ಮಹಾತ್ಮರ ತ್ಯಾಗ ಬಲಿದಾನ ಶ್ರಮ ಮತ್ತು ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗುವಂತಾಯಿತು. ಬ್ರಿಟಿಷರ ದಬ್ಬಾಳಿಕೆಯ ಕಾರ್ಗತ್ತಲೆಯಿಂದ ಬೆಳಕಿಗೆ ತಂದ ಆಗಸ್ಟ್‌ 15 ಭಾರತೀಯರೆಲ್ಲರಿಗೂ ಸಂಭ್ರಮದ ದಿನವಾಗಿದೆ ಎಂದು ನುಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು 40 ಜನ ಗೃಹರಕ್ಷಕರು ಉಪಸ್ಥಿತರಿದ್ದರು.

error: Content is protected !!
Scroll to Top