ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ

(ನ್ಯೂಸ್ ಕಡಬ) newskadaba.com ವಿಜಯಪುರ ,ಸಪ್ಟೆಂಬರ್.13.ತೊರವಿ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ‌ ಡಿಕ್ಕಿಯಾಗಿದ್ದು, ಇಬ್ಬರು ಚಾಲಕರು ಸೇರಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

Gems

ಬಸ್ ಹಾಗೂ ಲಾರಿ ಚಾಲಕರು ಕುಳಿತ ಸೀಟುಗಳಲ್ಲಿಯೇ ಸಿಲುಕಿ ಇಬ್ಬರ ದೇಹಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ. ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭಿರ ಗಾಯವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Scroll to Top