ಚಿತ್ರದುರ್ಗ: ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದ ರೈಲು ► ಬಾಣಂತಿ ಸೇರಿ ನಾಲ್ವರು ಮೃತ್ಯು, ಪವಾಡ ಸದೃಶ ಪಾರಾದ ಮಗು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಆ.17. ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲೊಂದು ಕ್ರಾಸಿಂಗ್‍ನಲ್ಲಿ  ಆಂಬುಲೆನ್ಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಬಾಣಂತಿ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ಗುರುವಾರ ಮುಂಜಾನೆ ನಡೆದಿದೆ.

ಮಾನವ ರಹಿತ ರೈಲ್ವೆ ಲೆವೆಲ್ ಕ್ರಾಸಿಂಗ್‍ನಲ್ಲಿ ರೈಲು ಬರುತ್ತಿದ್ದುದನ್ನು ಗಮನಿಸಿಯೂ ಬೇಗನೆ ದಾಟುವ ಭರದಲ್ಲಿ ವಾಹನವನ್ನ ಅತಿ ವೇಗವಾಗಿ ಚಲಾಯಿಸಿದಾಗ ರೈಲು ಢಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ 50 ಮೀಟರ್ ದೂರದ ಹಳ್ಳಕ್ಕೆ ಹೋಗಿ ಬಿದ್ದಿದೆ. ಘಟನೆಯಲ್ಲಿ ಬಾಣಂತಿ ಚಂದ್ರಕಲಾ ಸಾವಿತ್ರಮ್ಮ, ಗಂಗಮ್ಮ, ಸ್ಥಳದಲ್ಲೇ ಮೃತಪಟ್ಟರೆ ಲಕ್ಷ್ಮಮ್ಮ ಎಂಬವರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. 7 ದಿನಗಳ ಮಗು ಪವಾಡ ಸದೃಶವಾಗಿ ಪಾರಾಗಿದೆ. ಘಟನೆಗೆ ಆಂಬುಲೆನ್ಸ್ ಚಾಲಕನ ನಿರ್ಲಕ್ಷ್ಯವೇ ಕಾರಣವೆಂದು ಹೇಳಲಾಗಿದ್ದು, ತಳಕು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top