ಅನರ್ಹ ಶಾಸಕರಿಗೆ ಬಿಗ್ ಶಾಕ್ ➤ 15 ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21. ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಅವಧಿಯಲ್ಲಿ ಅನರ್ಹಗೊಂಡ 17 ಕಾಂಗ್ರೆಸ್- ಜೆಡಿಎಸ್ ಶಾಸಕರ ಪೈಕಿ ತಡೆಯಾಜ್ಞೆ ಇರುವ ಎರಡು ಕ್ಷೇತ್ರಗಳನ್ನು ಹೊರತುಪಡಿಸಿ 15 ಕ್ಷೇತ್ರಗಳಿಗೆ ಉಪಚುನಾವಣೆಗೆ ಚುನಾವಣಾ ಇಲಾಖೆಯು ದಿನಾಂಕವನ್ನು ನಿಗದಿಪಡಿಸಿದೆ.

ಅಕ್ಟೋಬರ್ 4 ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನಾಂಕವಾಗಿದ್ದು, ಮತದಾನ ಪ್ರಕ್ರಿಯೆಯು ಅಕ್ಟೋಬರ್ 21 ರಂದು ನಡೆಯಲಿದೆ. 24 ರಂದು ಫಲಿತಾಂಶ ಪ್ರಕಟವಾಗಿದ್ದು, ಎಲ್ಲಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

Also Read  ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡಿ ➤ ಶ್ಯಾಮಲಾ ಎಸ್. ಕುಂದರ್ 

error: Content is protected !!
Scroll to Top