ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .18,  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7 ವರ್ಷದ ಮಗ ಹಾಗೂ 6 ವರ್ಷದ ಕಂದಮ್ಮ ಮೃತ ದುರ್ದೈವಿಗಳು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದ್ದು, ಬೆಳಿಗ್ಗೆ ಸಂಬಂಧಿಕರು ಬಾಗಿಲು ತೆರೆದಾಗ ಈ ವಿಚಾರ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬಸವಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!
Scroll to Top