ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿ ಮರ…!

(ನ್ಯೂಸ್ ಕಡಬ) newskadaba.com ಕಡಬ, ಆ.18, ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಎಂಬಲ್ಲಿ ಅಪಾಯಕಾರಿ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು ಅನಾಹುತವನ್ನು ಆಹ್ವಾನಿಸುತ್ತಿದೆ.

ರಾಜ್ಯ ರಸ್ತೆಯಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತಿರುಗುವಲ್ಲಿ ಧರೆಯ ಅಂಚಿನಲ್ಲಿ ರಸ್ತೆಗೆ ಬಾಗಿ ನಿಂತಿದೆ. ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಯಾತ್ರಾರ್ಥಿಗಳ ವಾಹನಗಳಲ್ಲದೆ, ಶಾಲಾ  – ಕಾಲೇಜು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಅನೇಕ ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಕಳೆದ ಮರ್ದಾಳ ಗ್ರಾಮ ಸಭೆಯಲ್ಲಿ ಈ ಮರ ತೆರವಿನ ಕುರಿತು ಗ್ರಾಮಸ್ಥರು ಪ್ರಶ್ನಿಸಿದಾಗ ಸಂಬಂಧಪಟ್ಟ ಅಧಿಕಾರಿಗಳು ತೆರವುಗೊಳಿಸುವ ಭರವಸೆ ನೀಡಿದ್ದರೂ ಇದುವರೆಗೆ ಸ್ಪಂದನೆ ದೊರೆತಿಲ್ಲ ಎಂದು ಸಾರ್ವಜನಿಕರು ಆರೋಪ ವ್ಯಕ್ತಪಡಿಸಿದ್ದಾರೆ.

error: Content is protected !!
Scroll to Top