Breaking – ಸುಳ್ಯ: ಲಾರಿ ಮತ್ತು ಕಾರು ನಡುವೆ ಢಿಕ್ಕಿ – ನಜ್ಜುಗುಜ್ಜಾದ ಕಾರು ➤ ಏಳು ಜೀವಗಳನ್ನು ಬಲಿ ತೆಗೆದುಕೊಂಡ ನೆನಪು ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.18. ಪದೇ ಪದೇ ವಾಹನ ಅಪಘಾತದಲ್ಲಿ ಸುದ್ದಿಯಾಗುತ್ತಿರುವ ಸುಳ್ಯ ತಾಲೂಕಿನ ಅಡ್ಕಾರ್ ನಲ್ಲಿ ಗುರುವಾರ ರಾತ್ರಿ ಮತ್ತೆ ಅಪಘಾತವಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ‌.

ಸುಳ್ಯದಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಶೆವರ್ಲೆ ಬೀಟ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ರಾಷ್ಟ್ರೀಯ ಹೆದ್ದಾರಿ 275 ರ ಅಡ್ಕಾರ್ ಬಳಿ ಮುಖಾಮುಖಿ ಢಿಕ್ಮಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಅಕ್ಟೋಬರ್ 01 ಮತ್ತು ಅಕ್ಟೋಬರ್ 11 ರಂದು ನಡೆದ ಸರಣಿ ಅಪಘಾತದಲ್ಲಿ ಒಟ್ಟು 7 ಮಂದಿ ಅಸುನೀಗಿದ್ದರು‌. ಈ ಭೀಕರ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆಯಾದರೂ ಯಾವುದೇ ಅಪಾಯವಿಲ್ಲದೆ ಪ್ರಯಾಣಿಕರು ಪಾರಾಗಿರುವುದು ಅದೃಷ್ಟವೇ ಸರಿ.

Also Read  ದುರಂತ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

error: Content is protected !!
Scroll to Top