ಶರತ್ ಮಡಿವಾಳ ಕೊಲೆ ಪ್ರಕರಣ ► ಮತ್ತಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.19. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರದಂದು ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಬಂಧಿತರನ್ನು ಸಕಲೇಶಪುರ ನಿವಾಸಿಗಳಾದ ಸುಹೈಲ್​ ಹಾಗೂ ಸಾದಿಕ್​ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡದ ಎಸ್‌ಪಿ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.  ಜುಲೈ 4ರಂದು ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶರತ್‍ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಜುಲೈ 7ರಂದು ರಾತ್ರಿ ಮೃತಪಟ್ಟಿದ್ದರು. ಪ್ರಮುಖ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

error: Content is protected !!
Scroll to Top