ಹಳಿ ತಪ್ಪಿದ ಉತ್ಕಲ್ ಎಕ್ಸ್‌ಪ್ರೆಸ್‌ ರೈಲು ► 10 ಕ್ಕೂ ಅಧಿಕ ಮೃತ್ಯು, 100 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.19. ಪುರಿ – ಹರಿದ್ವಾರ್ – ಕಳಿಂಗ ಉತ್ಕಲ್ ಎಕ್ಸ್‌ಪ್ರೆಸ್‌ನ 6 ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ 70ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಹಳಿತಪ್ಪಿದ ಬೋಗಿಗಳಲ್ಲಿದ್ದ 100ಕ್ಕೂ ಅಧಿಕ ಪ್ರಯಾಣಿಕರನ್ನು ಪಾರು ಮಾಡಲಾಗಿದ್ದು, ಸ್ಥಳೀಯ ನಿವಾಸಿಗಳು ತಕ್ಷಣವೇ ಧಾವಿಸಿ ಬೋಗಿಗಳ ನಡುವೆ ಸಿಲುಕಿಕೊಂಡವರನ್ನು ರಕ್ಷಿಸಲು ನೆರವಾದರು. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಉನ್ನತಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಅವಘಡದಿಂದಾಗಿ ಉತ್ತರ ರೈಲ್ವೆ ಮಾರ್ಗದ ಹಲವಾರು ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

error: Content is protected !!
Scroll to Top