ಸಮಗ್ರ ಕೃಷಿ-ಮಾಹಿತಿ ಶಿಬಿರ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 25. ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆ, ಮಂಗಳೂರು ತಾಲೂಕು ಮತ್ತು ಕಲ್ಲಬೆಟ್ಟು ಸೇವಾ ಸಹಕಾರ ಸಂಘ (ನಿ) ಇದರ ಸಹಯೋಗದಲ್ಲಿ ಸಮಗ್ರ ಕೃಷಿ – ಮಾಹಿತಿ ಶಿಬಿರ ಕಾರ್ಯಕ್ರಮ ಡಿಸೆಂಬರ್ 3 ರಂದು ಬೆಳಿಗ್ಗೆ 9.45 ಗಂಟೆಗೆ ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷಯಧಾಮ ಸಭಾಭವನದಲ್ಲಿ ನಡೆಯಲಿದೆ.

ಮೂಡಬಿದ್ರೆ ಶಾಸಕ ಉಮಾನಾಥ ಎ ಕೋಟ್ಯಾನ್ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದು, ಕೃಷಿಕ ಸಮಾಜದ ಅಧ್ಯಕ್ಷ ಡಿ.ಸಂಪತ್ ಸಾಮ್ರಾಜ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

error: Content is protected !!

Join the Group

Join WhatsApp Group