ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com, ಕಡಬ, ನ.27.  ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಕಲೆ ಮತ್ತು ಸಾಹಿತ್ಯದ ತಿಳುವಳಿಕೆ ಮೂಡಿಸುವ ಸಲುವಾಗಿ ತಿರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ ನೀಡಲಾಯಿತು.

ತೃತೀಯ ಸೆಮಿಸ್ಟರ್ ನ ಪ್ರಶಿಕ್ಷಣಾರ್ಥಿಗಳ ಪಠ್ಯಕ್ರಮದ ಅಂಗವಾಗಿ ರಾಷ್ಟ್ರಕವಿ, ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಹುಟ್ಟೂರಿನ ಮನೆಯಾದ ಶಿವಮೊಗ್ಗ ಜಿಲ್ಲೆಯ ತಿರ್ಥಹಳ್ಳಿಯ ಕವಿಶೈಲಕ್ಕೆ ಭೇಟಿ ನೀಡಿ ಕುವೆಂಪುರವರ ಬಗೆಗಿನ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿದರು. ಕಾಲೇಜಿನ ಉಪನ್ಯಾಸಕ ಶ್ರೀ ರಘುನಂದನ ಕೆ. ಅವರ ಮಾರ್ಗದರ್ಶನದಲ್ಲಿ, ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ.ಎಲ್.ರವರ ಜೊತೆಗೂಡಿ ಒಂದು ದಿನದ ಅಧ್ಯಯನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

error: Content is protected !!
Scroll to Top