ರಿಕ್ಷಾಕ್ಕೆ ಢಿಕ್ಕಿಯಾಗಿ 200 ಮೀಟರ್ ಎಳೆದೊಯ್ದ ಲಾರಿ ➤ ಶಿಕ್ಷಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.01. ಲಾರಿಯೊಂದು ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ಶಿಕ್ಷಕಿಯೋರ್ವರು ಮೃತಪಟ್ಟ ಘಟನೆ ಕದ್ರಿ ಕಂಬ್ಲ ರಸ್ತೆಯಲ್ಲಿ ಭಾನುವಾರದಂದು ನಡೆದಿದೆ.

ಮೃತರನ್ನು ನಗರದ ಬಿಜೈ ನಿವಾಸಿ, ಪಣಂಬೂರು ಕೇಂದ್ರೀಯ ವಿದ್ಯಾಲಯದ ಶಿಕ್ಷಕಿ ಶೈಲಜಾ ಎಂದು ಗುರುತಿಸಲಾಗಿದೆ. ಇವರು ಪ್ರಯಣಿಸುತ್ತಿದ್ದ ಆಟೋ ರಿಕ್ಷಾಕ್ಕೆ ಲಾರಿಯೊಂದು ಢಿಕ್ಕಿಹೊಡೆದು ಸುಮಾರು 200 ಮೀಟರ್ ದೂರದವರೆಗೆ ಎಳೆದುಕೊಂಡು ಬಂದಿದ್ದು, ಹೊರಗಡೆ ಎಸೆಯಲ್ಪಟ್ಟ ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

error: Content is protected !!
Scroll to Top