ಗೃಹರಕ್ಷಕರ ಪಶ್ವಿಮ ವಲಯ ವೃತ್ತಿಪರ ಕ್ರೀಡಾಕೂಟದ ಉಧ್ಥಾಟನಾ ಸಮಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.3  ಗೃಹರಕ್ಷಕರ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ 2019 ಇದರ ಉದ್ಘಾಟನಾ ಸಮಾರಂಭ ಭಾನುವಾರದಂದು ಸಂಜೆ 5.00 ಗಂಟೆಗೆ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯಿತು.

ತುಕಡಿ ನಾಯಕರಾದ ಶ್ರೀ ವಸಂತ್ ಕುಮಾರ್ ಇವರ ನೇತೃತ್ವದಲ್ಲಿ ಅತಿಥಿಗಳಿಗೆ ಗೌರವ ವಂದನೆಯನ್ನು ನೀಡಲಾಯಿತು. ಕ್ರೀಡಾ ಜ್ಯೋತಿಯ ಆಗಮನವನ್ನು ಶ್ರೀ ಚೇತನ್, ಮೆಟಲ್ ಸಂಖ್ಯೆ 5, ಮಂಗಳೂರು ಘಟಕ ಇವರು ನಿರ್ವಹಿಸಿದರು. ಉಪ ಸಮಾದೇಷ್ಟರಾದ ಶ್ರೀ ರಮೇಶ್ ಇವರು ಪ್ರತಿಜ್ಞಾ ವಿಧಿ ಭೋದಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಟಿ.ಎನ್. ಶಿವಶಂಕರ, ಮುಖ್ಯ ಅಗ್ನಿಶಾಮಕಾಧಿಕಾರಿ, ಮಂಗಳೂರು ಪ್ರಾಂತ್ಯ ಇವರು ನೆರವೇರಿಸಿ ಮಾತನಾಡಿದ ಅವರು ನಾಲ್ಕು ಜಿಲ್ಲೆಯವರು ಸೇರಿ ಆಟ ಆಡುವ ಈ ಕ್ರೀಡಾಕೂಟವು ಒಂದು ಹಬ್ಬ. ಸಮವಸ್ತ್ರ ಧರಿಸುವ ಸಿಬ್ಬಂದಿಗಳಿಗೆ ಕ್ರೀಡೆಯೂ ಅತಿ ಅಗತ್ಯ ಎಂದು ನುಡಿದರು ಹಾಗೂ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ, ಸೋಲು ಗೆಲುವು ಮುಖ್ಯವಲ್ಲ ಎಂದು ನುಡಿದರು. ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಠರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಮಾತನಾಡಿ ಇಂದು ನಾಳೆ ಕ್ರೀಡಾ ಸ್ಪೂರ್ತಿಯಿಂದ ಕ್ರೀಡಾ ಕೂಟದಲ್ಲಿ ಆಡಬೇಕು. ವೈಯಕ್ತಿಕ ಗೆಲುವಿಗಿಂತ ಕ್ರೀಡೆ ಗೆಲ್ಲಬೇಕು ಹಾಗೂ ಪ್ರಾಮಾಣಿಕವಾಗಿ ಆಟ ಆಡಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹೆಚ್ಚಿಸಬೇಕು ಎಂದು ನುಡಿದರು. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಗೃಹರಕ್ಷಕರು ಉತ್ತಮ ಆಟ ಆಡಿ ಜಿಲ್ಲೆಯ ಘನತೆ ಹೆಚ್ಚಿಸಿ ಎಂದು ನುಡಿದರು. ರಾಜ್ಯಮಟ್ಟದಲ್ಲಿ ನಮ್ಮ ವಲಯದಲ್ಲಿ ಭಾಗವಹಿಸಿ ಶ್ರೀ ರಮೇಶ್ ಡೆಪ್ಯೂಟಿ ಕಮಾಂಡೆಂಟ್, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಇವರು ಸ್ವಾಗತಿಸಿದರು. ಶ್ರೀ ಮಾರ್ಕ್‍ಶೇರ್, ಘಟಕಾಧಿಕಾರಿ, ಮಂಗಳೂರು ಘಟಕ ಇವರು ವಂದನಾರ್ಪಣೆ ಮಾಡಿದರು ಕಛೇರಿ ಅಧೀಕ್ಷಕರಾದ ರತ್ನಾಕರ್, ಮಾರ್ಕ್‍ಶೇರ್, ಘಟಕಾಧಿಕಾರಿ ಹಾಗೂ ನಾಲ್ಕು ಜಿಲ್ಲೆಯ ಗೃಹರಕ್ಷಕ ಮತ್ತು ಗೃಹರಕ್ಷಕಿಯರುಗಳು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group