ಲಾರಿ ಹಾಗೂ ಬಸ್ಸ್ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com, ಪುತ್ತೂರು , ಡಿ.5  ಬಸ್ಸ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿ ಬಸ್ಸ್ ಚಾಲಕನಿಗೆ ಗಾಯಗೊಂಡ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ನಡೆದಿದೆ.


ಅಪಘಾತವಾಗಿ ಬಸ್ ಜಖಂಗೊಂಡಿರುವುದಲ್ಲದೇ, ಸುನಿಲ್ ಎಂಬವರಿಗೆ ಬಲ ಭುಜಕ್ಕೆ ಗುದ್ದಿದ ನೋವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿರುತ್ತಾರೆ. ಬಸ್ಸಿನಲ್ಲಿದ್ದ ಸಿಬ್ಬಂದಿಗಳಿಗೆ ಯಾವುದೇ ಗಾಯಗಳಾಗಿರುವುದಿಲ್ಲ. ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ - ಪಿಕಪ್ ಚಾಲಕ ಮೃತ್ಯು

error: Content is protected !!
Scroll to Top