ದಕ್ಷಿಣ ಭಾರತೀಯ ಹಿಂದಿ ಪ್ರಚಾರ ಸಭೆಯ ವಿವಿಧ ಹಿಂದಿ ಪರೀಕ್ಷೆಯಲ್ಲಿ ಶಕ್ತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ವಿದ್ಯಾರ್ಥಿಗಳ ಓದು ಕೇವಲ ತಮ್ಮ ತರಗತಿಯ ಪಾಠಗಳಿಗೆ ಮಾತ್ರ ಸೀಮಿತವಾಗಿರದೆ ಇತರ ಪುಸ್ತಕಗಳು, ದಿನ ಪತ್ರಿಕೆಯ ಓದಿನ ಮೂಲಕ ಪ್ರತಿಯೊಂದು ವಿಷಯದ ಬಗ್ಗೆ ಸಾಮಾನ್ಯ ಜ್ಞಾನವನ್ನು ತಿಳಿಯುವಂತಾಗಬೇಕು ಎಂದು ಶಕ್ತಿ ವಸತಿ ಶಾಲೆಯಲ್ಲಿ ನಡೆದ ಹಿಂದಿ ಪ್ರಾಥಮಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಂದರ್ಭದಲ್ಲಿ ಅತಿಥಿಗಳಾಗಿ ಭಾಗವಹಿಸಿದ ಸ.ಪ್ರ.ದ.ಕಾ ಸುಳ್ಯದ ಸಹಾಯಕ ಪ್ರಾಧ್ಯಾಪಕರಾದ ರಾಮಕೃಷ್ಣ ಕೆ.ಎಸ್ ಹೇಳಿದರು.


ಭಾರತವು ಹಲವು ರಾಜ್ಯ, ಭಾಷೆ, ಜಾತಿ, ಧರ್ಮ, ಪಂಗಡಗಳನ್ನು ಹೊಂದಿದ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿದರಾಷ್ಟ್ರ. ಆದರೆ ಇಡೀ ವಿಶ್ವದಾದ್ಯಂತ ಎಲ್ಲರಿಗೂ ಅರ್ಥವಾಗುವ, ಮಾತನಾಡುವ ಭಾಷೆ ಹಿಂದಿ, ಆ ಭಾಷೆಯು 1 ನಿರ್ದಿಷ್ಟರಾಜ್ಯ ಭಾಷೆ ಪ್ರಾಂತ್ಯದ ಭಾಷೆ ಎಂಬ ಭಾವನೆ ಇರದೆ, ಭಾರತದ ಭಾಷೆ ಎಂಬ ಭಾವನೆಯನ್ನು ಹೊಂದಿರಬೇಕು. ಹಿಂದಿ ಪರೀಕ್ಷೆಯಲ್ಲಿ ಪ್ರಾಥಮಿಕ, ಮಾಧ್ಯಮಿಕ ಮೊದಲಾದ ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾಗಬೇಕು ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

Also Read  ನಾವೂರು: ಅಂಗಡಿ ಮಾಲಕರಿಗೆ ಹಲ್ಲೆ ➤ ರೂ 1.50 ಲಕ್ಷ ನಗದು ದೋಚಿ ಪರಾರಿ

ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಕೆ.ಸಿ ನಾೈಕ್, ಆಡಳಿತ ಮೊಕ್ತೇಸರರು ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಶ್ರೀ ಪ್ರಭಾಕರ ಜಿ.ಎಸ್ ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಪ್ರಭಾಕರ ಜಿ.ಎಸ್, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ವಿದ್ಯಾಕಾಮತ್ ಜಿ, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಕ್ಯಾತ್‍ ರೈ ಉಪಸ್ಥಿತರಿದ್ದರು. ಕಾರ್ಯಕ್ರಮ ವಿದ್ಯಾರ್ಥಿ ಸಲೋನಿ ನಿರೂಪಿಸಿದರು, ಆಸ್ತ ಕೋಟೆ ಸ್ವಾಗತಿಸಿ, ವಿದ್ಯಾರ್ಥಿ ಸಿದ್ಧಾಂತ್ ವಂದಿಸಿದರು.

Also Read  ಪೆರಿಯಶಾಂತಿ: ಹೆದ್ದಾರಿ ಬದಿ ಕಸ ಎಸೆದವರಿಗೆ ದಂಡ ವಿಧಿಸಿದ ಪಂಚಾಯತ್

error: Content is protected !!
Scroll to Top