BIG BREAKING NEWS ಹೊಸದಿಲ್ಲಿಯಲ್ಲಿ ಬೀಕರ ಅಗ್ನಿ ದುರಂತ: 30ಕ್ಕೂ ಅಧಿಕ ಕಾರ್ಮಿಕರು ಸಾವು

ಹೊಸದಿಲ್ಲಿ, ಡಿ.8: ಭಾರೀ ಅಗ್ನಿ ಅವಘಡ ಉಂಟಾಗಿ 30ಕ್ಕೂ ಅಧಿಕ ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಇಲ್ಲಿ ನ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಕಾರ್ಖಾನೆಯಲ್ಲಿ ನಡೆದಿದೆ. 15 ಅಧಿಕ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಕಟ್ಟಡದ ಒಳಗಡೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

ಈ  ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಗ್ನಿಶಾಮಕ ದಳದ ಉಪ ಮುಖ್ಯಾಧಿಕಾರಿ ಸುನಿಲ್ ಚೌಧರಿ, ನಾವು ಇದುವರೆಗೆ ಹಲವು ಮಂದಿಯನ್ನು ಕಟ್ಟಡ ಒಳಗಿನಿಂದ ಕಾಪಾಡಿ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಿದ್ದೇವೆ. ಕೆಲವರು ಗಾಯಗೊಂಡಿದ್ದು ಇನ್ನು ಕೆಲವರು ಹೊಗೆಗೆ ಉಸಿರುಗಟ್ಟಿ ತಲೆಸುತ್ತಿ ಬಿದ್ದಿದ್ದಾರೆ. ಈ ಘಟನೆ ನಡೆಯುವಾಗ ಕಾರ್ಖಾನೆಯೊಳಗೆ 20ರಿಂದ 25 ಕಾರ್ಮಿಕರು ನಿದ್ದೆ ಮಾಡುತ್ತಿದ್ದರು ಎಂದು ಕಾರ್ಖಾನೆ ಮಾಲೀಕ ತಿಳಿಸಿದ್ದಾರೆ ಎಂದು ಚೌಧರಿ ಹೇಳಿದರು.

ಮಾಧ್ಯಮ ಪ್ರಮಾಣದಲ್ಲಿ ಬೆಂಕಿ ಹತ್ತಿ ಉರಿದಿದ್ದು ಇದೀಗ ಬೆಂಕಿಯನ್ನು ಸಂಪೂರ್ಣವಾಗಿ ಆರಿಸಲಾಗಿದೆ ಎಂದರು. ರಕ್ಷಣಾ ಕಾರ್ಯ ಮುಂದುವರಿದಿದೆ.

Scroll to Top