ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಹಿರಿಯ ಐಪಿಎಸ್ ಅಧಿಕಾರಿ ರಹ್ಮಾನ್ ರಾಜೀನಾಮೆ

ಹೊಸದಿಲ್ಲಿ, ಡಿ.12:  ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿರುವುದನ್ನು ವಿರೋಧಿಸಿ   ಮಹಾರಾಷ್ಟ್ರದ ಹಿರಿಯ ಐಪಿಎಸ್ ಅಧಿಕಾರಿ ಅಬ್ದುರ್ರಹ್ಮಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ವರದಿಯಾಗಿದೆ.

ರಾಜ್ಯಸಭೆಯಲ್ಲಿ ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾದ ಬೆನ್ನಲ್ಲೇ ರಹ್ಮಾನ್ ತನ್ನ ರಾಜೀನಾಮೆಯನ್ನು ಘೋಷಿಸಿದ್ದರು.

“ಇದೊಂದು ಮತೀಯವಾದದ್ದು ಹಾಗೂ ಸಂವಿಧಾನದ ಮೂಲಭೂತ ಆಶಯಕ್ಕೆ ವಿರುದ್ಧವಾಗಿದೆ ಎಂದು ರಹಮಾನ್ ಅಭಿಪ್ರಾಯವ್ಯಕ್ತಪಡಿಸಿದ್ದು, ಗುರುವಾರದಿಂದ ತಾನು ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ

Scroll to Top